ಸಿದ್ದಾಪುರ, ಆ. 30: ಕಾಂಗ್ರೆಸ್ ಮುಖಂಡ ಪಿ.ಸಿ. ಹಸೈನಾರ್ ಹಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಅವರಿಗೆ ಗುಡ್ಲೂರು ಗ್ರಾಮದಲ್ಲಿ ಮಾಲ್ದಾರೆ ಹಾಗೂ ಚೆನ್ನಯ್ಯನಕೊಟೆ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಮಾಲ್ದಾರೆ ವಲಯ ಕಾಂಗ್ರೆಸ್ ಅಧ್ಯಕ್ಷ ಸಜಿ ಥೋಮಸ್, ಚೆನ್ನಯ್ಯನಕೊಟೆ ವಲಯ ಕಾಂಗ್ರೆಸ್ ಅಧ್ಯಕ್ಷ ವಾಟೇರಿರ ಸುರೇಶ್ ಸೋಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ತಾಲೂಕು ಪಂಚಾಯಿತಿ ಸದಸ್ಯರಾದ ಚಿನ್ನಮ್ಮ, ಕಾವೇರಮ್ಮ, ಹಿರಿಯ ಮುಖಂಡ ಅಜ್ಜಿನಿಕಂಡ ರಾಜು ಅಪ್ಪಯ್ಯ, ಬಾವ ಮಾಲ್ದಾರೆ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಲಲಿತಾ, ಗಣೇಶ್, ಉಮೇಶ್, ಬೋಜಪ್ಪ, ಮಾಲತಿ, ಮುತ್ತು, ಮಾಜಿ ಸದಸ್ಯರುಗಳಾದ ಅಬ್ದುಲ್ ನಿಸಾರ್, ಅಬುಬಕ್ಕರ್, ಮಹಮ್ಮದಾಲಿ ಸೇರಿದಂತೆ ಮತ್ತಿತರರು ಹಾಜರಿದ್ದರು.