ಮಡಿಕೇರಿ, ಜೂ. 22: ರಾಜ್ಯ ಕಾಂಗ್ರೆಸ್‍ನ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್‍ನ ಪ್ರಮುಖರು ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ಕೆಪಿಸಿಸಿ ಕಚೇರಿಗೆ ತೆರಳಿದ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಭಿನಂದಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದನ್ನು ಸ್ಮರಿಸಿದ ಪ್ರಮುಖರು ಪಕ್ಷದ ಬಲವರ್ಧನೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ. ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಪಕ್ಷದ ವಕ್ತಾರ ಕೆ.ಕೆ. ಮಂಜುನಾಥ್ ಕುಮಾರ್, ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಅಬ್ದುಲ್ ರೆಹಮಾನ್, ಕೆಎಸ್‍ಆರ್‍ಟಿಸಿ ನಿಗಮದ ನಿರ್ದೇಶಕ ಶೌಕತ್, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಥ್ಯು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯಾಕುಬ್, ಪ್ರಮುಖರಾದ ಬಿ.ಎನ್. ಪ್ರಕಾಶ್, ನಟೇಶ್ ಗೌಡ, ವಾಸು ಕುಟ್ಟಪ್ಪ, ಮಂಜುನಾಥ್ ಗುಂಡೂರಾವ್, ಪ್ರಮೋದ್ ಗಣಪತಿ, ಲಕ್ಷ್ಮೀಕಾಂತ್, ಟಾಟು ಮೊಣ್ಣಪ್ಪ, ಖುರೇಶಿ, ಮನು ಮೇದಪ್ಪ, ಗೋಕುಲ್‍ನಾಥ್ ನಾಯಕ್ ಮತ್ತಿತರ ಪ್ರಮುಖರು ಹಾಜರಿದ್ದು, ದಿನೇಶ್ ಗುಂಡೂರಾವ್ ಅವರನ್ನು ಅಭಿನಂದಿಸಿದರು.