ಕುಶಾಲನಗರ, ಜೂ 26: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಮಳೆಯಾಗುತ್ತಿದ್ದು ಬತ್ತಿ ಹೋಗಿದ್ದ ಕಾವೇರಿ ನದಿ ಭೋರ್ಗರೆಯುತ್ತಾ ಹರಿಯುತ್ತಿರುವ ದೃಶ್ಯ ಗೋಚರಿಸಿದೆ.

ಕೊಪ್ಪ ಕಾವೇರಿ ನದಿ ಭಾಗದಲ್ಲಿ 2.5 ಮೀ ಎತ್ತರದಲ್ಲಿ ನೀರು ಹರಿಯುತ್ತಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ದಿನವಿಡೀ ಮೋಡ ಕವಿದು ತಂಪಾದ ವಾತಾವರಣದೊಂದಿಗೆ ಆಗಾಗ್ಗೆ ಮಳೆ ಸುರಿಯುತ್ತಿದ್ದು ಜನಜೀವನ ಬಹುತೇಕ ಅಸ್ತವ್ಯಸ್ಥಗೊಂಡಿತ್ತು.