ಕುಶಾಲನಗರ, ಅ. 21: ಕೂಡುಮಂಗಳೂರು ಗ್ರಾಮ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಧಾಳಿ ಪ್ರಕರಣಕ್ಕೂ ತನಗೂ ಯಾವದೇ ರೀತಿಯ ಸಂಬಂಧ ಇರುವದಿಲ್ಲ ಎಂದು ಕೂಡುಮಂಗಳೂರು ಗ್ರಾಮಪಂಚಾಯ್ತಿ ಸದಸ್ಯ ರಮೇಶ್ ಸ್ಪಷ್ಟಪಡಿಸಿದ್ದಾರೆ. ‘ಶಕ್ತಿ’ಗೆ ಪ್ರಕಟಣೆಯಲ್ಲಿ ಈ ಬಗ್ಗೆ ತಿಳಿಸಿರುವ ಅವರು, ತಾನು ಕಳೆದ ಎರಡು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಯಾಗಿ ಉತ್ತಮ ಸೇವೆ ನಿರ್ವಹಿಸುತ್ತಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ಯಾವದೇ ವಿಚಾರಣೆಯಾಗಲೀ ಅಥವಾ ಮೊಕದ್ದಮೆ ದಾಖಲಾಗಿರುವದಿಲ್ಲ ಎಂದು ತಿಳಿಸಿದ್ದಾರೆ.