ಕುಶಾಲನಗರ, ಆ. 31: ಇತ್ತೀಚೆಗೆ ಕುಶಾಲನಗರ ಪಟ್ಟಣದಲ್ಲಿ ನಡೆದ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪರ್ಲಕೋಟಿ ಪ್ರಭು ಅಲಿಯಾಸ್‍ಪಳಂಗಪ್ಪ (54) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಪ್ಪ ಗ್ರಾಮದ ನಿವಾಸಿಯಾಗಿರುವ ಪ್ರಭು ಕುಶಾಲನಗರದಿಂದ ಮೈಸೂರು ಕಡೆಗೆ ರಸ್ತೆಯ ಆರ್‍ಎಂಸಿ ಮುಂಭಾಗ ತೆರಳುತ್ತಿದ್ದ ಸಂದರ್ಭ ಖಾಸಗಿ ಬಸ್ ಒಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಸಂದರ್ಭ ಬೈಕ್ ಚಾಲಿಸುತ್ತಿದ್ದ ಪ್ರಭು ಅವರ ತಲೆಗೆ ತೀವ್ರ ಏಟಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಮತ್ತು ಮೈಸೂರು ಆಸ್ಪತ್ರೆಗಳಿಗೆ ದಾಖಲಿಸಿ ದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.