ಮಡಿಕೇರಿ, ಜೂ. 19: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವ ಬಗ್ಗೆ ಜಿಲ್ಲಾ ಕಾಂಗ್ರೆಸ್ನ ಐದು ಬ್ಲಾಕ್ ಘಟಕಗಳು ಅಸಮಾಧಾನ ವ್ಯಕ್ತಪಡಿಸಿವೆ.
ಪತ್ರಿಕಾಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ, ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ವಿಚಾರದ ಹಿನ್ನೆಲೆಯಲ್ಲಿ ಐದು ಬ್ಲಾಕ್ ಘಟಕಗಳ ಸಭೆÉ ನಡೆಸಿ, ದಿನೇಶ್ ಗುಂಡೂರಾವ್ ಅವರನ್ನು ಮರಳಿ ಸಚಿವ ಸಂಪುಟಕ್ಕೆ ಸೇರ್ಪಡೆ ಗೊಳಿಸುವಂತೆ ಆಗ್ರಹಿಸಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳ ಬಳಿಗೆ ಶೀಘ್ರ ನಿಯೋಗ ತೆರಳುವ ಪ್ರಮುಖ ನಿರ್ಧಾರವನ್ನು ಕೈಗೊಂಡಿರುವದಾಗಿ ತಿಳಿಸಿದರು.
ಕಳೆದ ಸಾಲಿನ ಡಿಸೆಂಬರ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕವಿರಿಸಿಕೊಳ್ಳುವ ಮೂಲಕ ಪಕ್ಷದ ಬಲವರ್ಧನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಇಲ್ಲಿಯವರೆಗಿನ ಉಸ್ತುವಾರಿಯ ಜವಾಬ್ದಾರಿಯಲ್ಲಿ ಅವರು ಜಿಲ್ಲೆಗೆ 32 ಬಾರಿ ಭೇಟಿ ನೀಡಿ ಪಕ್ಷದ ಕಾರ್ಯಕರ್ತರಲ್ಲಿ ವಿಶೇಷ ಹÅರುಪು ತುಂಬಿದ್ದರೆಂದು ಹೇಳಿದರು.
ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನ ಪ್ರಯತ್ನಗಳÀನ್ನು ಮಾಡುವ ಸೌಜನ್ಯತೆ ಹೊಂದಿದ್ದ ದಿನೇಶ್ ಗುಂಡೂರಾವ್ ಅವರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಉತ್ತಮವಾಗಿ ಸಂಘಟಿಸಿ ಮುಂದಿನ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಉದ್ದೇಶ ಹೊಂದಿದ್ದಾಗಿ ಅವರು ತಿಳಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಿಯುಕ್ತಿಗೊಳಿಸು ವವರಿಗೆ ಕೊಡಗಿನಲ್ಲಿ ಕಾರ್ಯ ನಿರ್ವಹಿಸಲು ಕನಿಷ್ಟ 2 ವರ್ಷ ಗಳಾದರೂ ಅವಕಾಶ ನೀಡಿ. ಕೇವಲ ಎರಡು ಮೂರು ತಿಂಗಳ ಅವಕಾಶ ನೀಡಿದರೆ, ಇಲ್ಲಿನ ಸಮಸ್ಯೆಗಳನ್ನರಿತು ಕಾರ್ಯನಿರ್ವಹಿಸುವದು ಕಷ್ಟಸಾಧ್ಯ ವಾಗುತ್ತದೆಂದು ಗಣೇಶ್ ಹೇಳಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ದಿನೇಶ್ ಗುಂಡೂರಾವ್ ಅವರು ಉಸ್ತುವಾರಿಯಾಗಿದ್ದ ಅವಧಿಯಲ್ಲಿ ಕಳೆದ ನಾಲ್ಕು ದಶಕಗಳಿಂದ ಸಾಧ್ಯವಾಗದೆ ಇದ್ದ ಕಂದಾಯ ಗ್ರಾಮಗಳ ಘೋಷಣೆಯ ಮಹತ್ವದ ಕಾರ್ಯವನ್ನು ನಡೆಸಿದ್ದರು. ಅವರಿಂದ ಮತ್ತಷ್ಟು ನಿರೀಕ್ಷೆಗಳನ್ನು ಕೊಡಗು ಜಿಲ್ಲೆಯ ಜನತೆ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಬೇಕೆಂದರು.
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ರಮಾನಾಥ್ ಮಾತನಾಡಿ, ಸಚಿವ ಸಂಪುಟ ಪುನರ್ ರಚನೆÀಯಲ್ಲಿ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವದು ಜಿಲ್ಲಾ ಕಾಂಗ್ರೆಸ್ಸಿಗರಿಗೆ ಅತೀವ ನೋವನ್ನುಂಟುಮಾಡಿದೆ. ಈಗಾಗಲೇ ಸಭೆಯ ನಿರ್ಣಯದಂತೆ ಪಕ್ಷದ ರಾಜ್ಯಾಧ್ಯಕ್ಷರಿಗೆ, ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸುವಂತೆ ಕೋರಿ ಫ್ಯಾಕ್ಸ್ ಸಂದೇಶ ಕಳುಹಿಸಿ ರುವದಾಗಿ ತಿಳಿಸಿದರು.
ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ದಿನೇಶ್ ಗುಂಡೂರಾವ್ ಅವರನ್ನು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಎಐಸಿಸಿ ಮತ್ತು ರಾಜ್ಯ ಕಾಂಗ್ರೆಸ್ನಲ್ಲಿ ಬಳಸಿಕೊಳ್ಳುವ ಉದ್ದೇಶಗಳ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಕೈಬಿಡಲಾಗಿದೆಯಾದ್ದರಿಂದ ಇದೊಂದು ಹಿನ್ನಡೆಯಲ್ಲ. ಹೀಗಿದ್ದೂ ಉತ್ತಮ ಸಂಘಟನಾ ಸಾಮಥ್ರ್ಯ ಹೊಂದಿದ ದಿನೇಶ್ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸ ಬೇಕಿತ್ತೆಂದು ಅಭಿಪ್ರಾಯಪಟ್ಟರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಹಾಗೂ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಉಪಸ್ಥಿತರಿದ್ದರು.