ಮಡಿಕೇರಿ, ಸೆ. 17: ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅಕ್ಟೋಬರ್ 15 ರಂದು ನಡೆಯಲಿದ್ದು, ಪರಿಶಿಷ್ಟ ಪಂಗಡದವರ ಶೈಕ್ಷಣಿಕ, ಆರ್ಥಿಕ ಪ್ರಗತಿಗಾಗಿ ದುಡಿದ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸಾಕಾರಗೊಳಿಸು ವಂತಹ ಯಾವದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿ ಸಾಧನೆ ಮಾಡಿದ ಬಗ್ಗೆ ದಾಖಲೆ ಹೊಂದಿರುವ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವ್ಯಕ್ತಿಗಳು ಹೆಚ್ಚಿನ ಮಾಹಿತಿಗೆ ಕೂಡಲೇ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇವರನ್ನು ಸಂಪರ್ಕಿಸುವಂತೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.