ಸುಂಟಿಕೊಪ್ಪ, ಅ.5: ಕೆದಕಲ್‍ನಲ್ಲಿ ಚಾಲಕ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಗೆ ಮಗುಚಿಕೊಂಡ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ತೆರಳುತ್ತಿದ್ದ ಲಾರಿ (ಟಿಎನ್ 18 -ಡಿ5211) ವಾಹನವು ಕೆದಕಲ್ ಭದ್ರಕಾಳೇಶ್ವರಿ ದೇವಸ್ಥಾನದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪ್ಲಿ ಮಗುಚಿಕೊಂಡಿದೆ. ಘಟನಾ ಸ್ಥಳಕ್ಕೆ ಹೊಂದಿಕೊಂಡಂತೆ ವಾಸದ ಮನೆಗಳಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ.

ಚಾಲಕ, ಸಹಾಯಕ ವಾಹನದಿಂದ ಪರಾರಿಯಾಗಿದ್ದು ವಿದ್ಯುತ್ ಕಂಬ ಇನ್ನಿತರ ವಸ್ತುಗಳು ಹಾನಿಗಿಡಾಗಿದೆ. ಪೊಲೀಸರು ಘಟನ ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಚಿತ್ರ.2 ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಕೊಂಡಿರುವ ಲಾರಿ.