ಸೋಮವಾರಪೇಟೆ, ಜೂ. 16: ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ವ್ಯಕ್ತಿಯೊಬ್ಬರ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾಗಿದ್ದ ಪರಿಹಾರ ಧನದ ಚೆಕ್ಕನ್ನು ಶಾಸಕ ರಂಜನ್ ತಮ್ಮ ಕಚೇರಿಯಲ್ಲಿ ವಿತರಿಸಿದರು. ನೆಲ್ಲಿಹುದಿಕೇರಿ ಗ್ರಾಮದ ತಮ್ಮಯ್ಯ ಎಂಬವರು ಇತ್ತೀಚೆಗೆ ಅಪಘಾತವೊಂದರಲ್ಲಿ ತಲೆಗೆ ತೀವ್ರ ಪೆಟ್ಟಾಗಿ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರು. ಶಾಸಕ ರಂಜನ್ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಸಾವಿರ ರೂ. ಮಂಜೂರು ಮಾಡಲಾಗಿತ್ತು.

ಪರಿಹಾರ ಧನ ಹಸ್ತಾಂತರ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.