ಮಡಿಕೇರಿ, ಜು. 1: ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜ ಅರಸು ವಸತಿ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸುವ ಸಂಬಂಧ ಸರ್ಕಾರ ಪ್ರಸಕ್ತ ಸಾಲಿಗೆ ನಿಗದಿ ಪಡಿಸಿದ ಗುರಿಗೆ ಅರ್ಹ ಫಲಾನುಭವಿ ಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ವರ್ಗಕ್ಕೆ ಸೇರಿದ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಜುಲೈ 5 ಕೊನೆ ದಿನವಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ವಿಶೇಷ ವರ್ಗಕ್ಕೆ ಸೇರಿದ ಗುಂಪುಗಳ ವಿವರ ಇಂತಿದೆ: ರಸ್ತೆ ಬದಿ, ಅಂಗಡಿಗಳ ಜಗುಲಿಯಲ್ಲಿ, ವಿಕಲಚೇತನರು, ಕುಷ್ಠರೋಗದಿಂದ ಗುಣಮುಖರಾದವರು, ಹೆಚ್.ಐ.ವಿ. ಸೋಂಕಿತರು, ಮಂಗಳಮುಖಿಯರು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿಯರು, ವಿಧವೆಯರು, ಜೀತದಿಂದ ಮುಕ್ತರಾದವರು, ಸಫಾಯಿ ಕರ್ಮಚಾರಿಗಳು, ದೌರ್ಜನ್ಯಕ್ಕೆ ಒಳಗಾದವರು, ಮತೀಯ ಗಲಭೆ ಹಾಗೂ ಚಳುವಳಿಗಳಿಂದ ಹಾನಿಗೊಳಗಾದ ವರು, ಅಲೆಮಾರಿ ಜನಾಂಗದವರು, ವಿಶೇಷ ವೃತ್ತಿಪರ ಗುಂಪುಗಳು.