ಸಿದ್ದಾಪುರ, ಅ. 6: ವಾಹನ ಚಾಲಕರ ಮಜ್ದೂರ್ ಸಂಘದ ವತಿಯಿಂದ ತಾ. 10 ರಂದು ಸಿದ್ದಾಪುರ ಬಸ್ ನಿಲ್ದಾಣದಲ್ಲಿ 23ನೇ ವರ್ಷದ ಅದ್ಧೂರಿ ಆಯುಧ ಪೂಜಾ ಉತ್ಸವವು ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಸತೀಶ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9ಕ್ಕೆ ಕಾಫಿ ಬೆಳಗಾರ ಮಂಡೆಪಂಡ ರಮೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗಾರ ವೆಂಕಪ್ಪ ರೈ ಉದ್ಘಾಟನೆ ಮಾಡಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಠಾಣಾಧಿಕಾರಿ ಬಿ.ಜಿ ಕುಮಾರ್, ಜಿಲ್ಲಾ ಮಟ್ಟದ ಸೈಕಲ್ ರೇಸ್ ಮತ್ತು ರಸ್ತೆ ಓಟಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 6.30ಕ್ಕೆ ಸಾಮೂಹಿಕ ಆಯುಧ ಪೂಜಾ ಕಾರ್ಯಕ್ರಮ ನಂತರ ಸಂಘದ ಅಧ್ಯಕ್ಷ ಸೂದನ ಸತೀಶ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ. ಮಣಿ, ವಕೀಲ ರತ್ನಾಕರ ಶೆಟ್ಟಿ, ತಾ.ಪಂ. ಸದಸ್ಯರಾದ ಕೆ.ಎಂ. ಜೆನೀಶ್, ಅಜೀತ್ ಕರುಂಬಯ್ಯ, ಬಿ.ಜೆ.ಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ಬಿ.ಜೆ.ಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ವಿ. ಮನೋಹರ್, ವರ್ತಕ ಜೋಸೆಫ್ ಶ್ಯಾಂ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎಂ.ಎಂ. ಮಣಿ, ಬೆಳಗಾರ ವೆಂಕಪ್ಪ ರೈ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ. ರಾತ್ರಿ 8ಕ್ಕೆ ರಾಗಂ ತಂಡದವರಿಂದ ರಸ ಮಂಜರಿ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾ ಮಟ್ಟದ ಸೈಕಲ್, ರಸ್ತೆ ಓಟ, ನೃತ್ಯ, ಸ್ವರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸುವ ತಂಡಗಳು ಮೊ 9448000397, 9740132068, 9482192613. ಸಂಖ್ಯೆಗೆ ಹೆಸರು ನೋಂದಾಯಿಸಿಕೊಳ್ಳಬೇಕೆಂದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಶೇಷಪ್ಪ, ಕಾರ್ಯದರ್ಶಿ ರಾಜು, ಸಹ ಕಾರ್ಯದರ್ಶಿ ಅನೀಶ್, ಖಜಾಂಜಿ ಪವಿ, ಸದಸ್ಯ ರವಿ ಉಪಸ್ಥಿತರಿದ್ದರು