ಸುಂಟಿಕೊಪ್ಪ, ಜು. 3: 7 ನೇ ಹೊಸಕೋಟೆ ಗ್ರಾಮದ ಗಣೇಶ್ ಎಂಬವರಿಗೆ ಸೇರಿದ ವಾಸದ ಮನೆಯ ಮೇಲೆ ಮರವೊಂದು ಬಿದ್ದು, ನಷ್ಟ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಚಂದ್ರಶೇಖರಯ್ಯ, ಗ್ರಾಮ ಲೆಕ್ಕಿಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2 ದಿನಗಳಿಂದ ಬೀಸುತ್ತಿರುವ ಗಾಳಿ, ಮಳೆಗೆ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ನೂರಾರು ಮರ ಹಾಗೂ ಮರದ ರಂಬೆಗಳು ವಿದ್ಯುತ್ ತಂತಿ ಕಂಬಗಳ ಮೇಲೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಕಳೆದ 5-6 ದಿನಗಳಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದು ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಜೂನಿಯರ್ ಇಂಜಿನಿಯರ್ ಬಸವರಾಜು, ನಾಕೂರು ಶಿರಂಗಾಲ,ಅಭ್ಯಲ, ಕೆದಕಲ್, ಹೊರೂರು ಭಾಗಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಕೇಳಿಕೊಂಡಿದ್ದಾರೆ.