ಮಡಿಕೇರಿ, ಫೆ. 5: ಕಡಗದಾಳು ಗ್ರಾಮದ ಶ್ರೀ ಬೊಟ್ಲಪ್ಪ ದೇವಾಲಯಕ್ಕೆ ತೆರಳುವ ರಸ್ತೆಯನ್ನು ಜಿ.ಪಂ. ರೂ. 5 ಲಕ್ಷ ಮತ್ತು ವಿಧಾನ ಪರಿಷತ್ತು ಸದಸ್ಯರ ಅನುದಾನ ರೂ. 2 ಲಕ್ಷದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣದ ಸಲುವಾಗಿ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.ಈ ಸಂದರ್ಭ ಕ್ಷೇತ್ರದ ಸದಸ್ಯರು, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಕಡಗದಾಳು ಪಂಚಾಯಿತಿ ಸದಸ್ಯರಾದ ರಮೇಶ್ ಆಚಾರ್ಯ, ಪೊನ್ನಚೆಟ್ಟಿರ ರಮೇಶ್, ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಹಾಜರಿದ್ದರು. ಶಾಸಕರುಗಳು ಮತ್ತು ಅಧ್ಯಕ್ಷರು ಶ್ರೀ ಬೊಟ್ಲಪ್ಪ ದೇವಾಲಯಕ್ಕೆ ತೆರಳಿ ಪ್ರಾರ್ಥಿಸಿ ನಂತರ ಭೂಮಿಪೊಜೆ ನೆರವೇರಿಸಿದರು.