*ಗೋಣಿಕೊಪ್ಪಲು, ಫೆ. 5: ತೂಚಮಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಂಡೀಪುರ ಎಸಿಎಫ್ ಅವರು ಚಲಿಸುತ್ತಿದ್ದ ಕಾರು ತಿತಿಮತಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ್ದು, ಕಾರು ಸಂಪೂರ್ಣ ಜಖಂಗೊಂಡು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣ ಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಂಡೀಪುರ ಎಸಿಎಫ್ ಪೂವಯ್ಯ, ಪತ್ನಿ ಹಾಗೂ ಪುತ್ರನೊಂದಿಗೆ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಅವಘಡ ಸಂಭವಿಸಿದ್ದು, ಪುತ್ರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.