ಕುಶಾಲನಗರ, ಫೆ. 8: ಕುಶಾಲನಗರ ಗಣಪತಿ ದೇವಾಲಯದ ಮುಂಭಾಗ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಲೋಕಾರ್ಪಣೆ ಇಂದು ನಡೆಯಿತು. ಕುಶಾಲನಗರ ಪಟ್ಟಣ ಪಂಚಾಯ್ತಿ ವತಿಯಿಂದ ಅಂದಾಜು 5 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣಗೊಂಡ ವೃತ್ತವನ್ನು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಎಂ.ಎಂ. ಚರಣ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಶರವಣಕುಮಾರ್ ಪಾಲ್ಗೊಂಡಿದ್ದರು. ಪಟ್ಟಣ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸುರಯ್ಯಭಾನು ಮತ್ತು ಸದಸ್ಯರು, ಮುಖ್ಯಾಧಿಕಾರಿ ಎ.ಎಂ.ಶ್ರೀಧರ್, ಕುಡಾ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಎನ್.ಮೊಣ್ಣಪ್ಪ ಮತ್ತಿತರ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.