ಮಡಿಕೇರಿ, ಫೆ. 9: ಕೊಡಗು ಜಿಲ್ಲೆಯ ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಒಳಗಿನ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳಿಗೆ ಯಾವದೇ ಪ್ರತಿಫಲವನ್ನು ಅಪೇಕ್ಷಿಸದೇ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳಿಗೆ ಸಹಾಯ ಮಾಡುವವರಿಗೆ ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆಯಡಿಯಲ್ಲಿ “ಜೀವ ರಕ್ಷಕ” ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಬಂಧ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾರ್ವಜನಿಕರು ಅರ್ಜಿಗಳನ್ನು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-225443 ಅನ್ನು ಸಂಪರ್ಕಿಸಬಹುದು. ಅರ್ಹ ಫಲಾನುಭವಿಗಳಿಗೆ ಪ್ರಶಸ್ತಿಯನ್ನು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ವಿತರಿಸಲಾಗುವದು ಎಂದು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ ತಿಳಿಸಿದ್ದಾರೆ.