*ಮೂರ್ನಾಡು, ಫೆ. 9: ಮೂರ್ನಾಡು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ವತಿಯಿಂದ ಮೂರ್ನಾಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ನಗರ-ಪಟ್ಟಣವನ್ನು ಸ್ವಚ್ಛವಾಗಿರಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ’ ಎಂಬ ವಿಷಯದಡಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮೂರ್ನಾಡು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಅಧ್ಯಕ್ಷ ಬಡುವಂಡ ಅರುಣ್ ಅಪ್ಪಚ್ಚು ಪಾಲ್ಗೊಂಡು ಸಸಿಗೆ ನೀರು ಹಾಯಿಸುವ ಮೂಲಕ ಚಾಲನೆ ನೀಡಿದರು.

ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಿ.ಎಂ. ಪೂಜಾ, ದ್ವಿತೀಯ ವಿ. ಲಕ್ಮೀಕಾಂತ ಗೌಡ, ತೃತೀಯ ಪಿ.ಆರ್. ಸ್ಪೂರ್ತಿ ಬಹುಮಾನ ಪಡೆದರು. ವೇದಿಕೆಯಲ್ಲಿ ಮೂರ್ನಾಡು ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಕಾರ್ಯದರ್ಶಿ ಎಂ. ಮಹೇಶ್ ಪೈ, ಆಡಳಿತ ಮಂಡಳಿ ನಿರ್ದೇಶಕ ವಿಘ್ನೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸರೋಜ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮನೋಜ್ ಉಪಸ್ಥಿತರಿದ್ದರು.

ಶಿಕ್ಷಕಿ ಸೀತಮ್ಮ ನಿರೂಪಿಸಿ, ರಾಜಮ್ಮ ವಂದಿಸಿದರು.

- ವಿಘ್ನೇಶ್ ಮೂರ್ನಾಡು