ಸೋಮವಾರಪೇಟೆ, ಫೆ.10: ಸಮೀಪದ ಅಬ್ಬಮಠ ಬಾಚಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ. ಹಾಸನ ಜಿಲ್ಲೆಯ ವಣಗೂರು ಕೂಡುರಸ್ತೆ ಮೂಲಕ ಸೋಮವಾರಪೇಟೆಗೆ ಮರಳನ್ನು ಅಕ್ರಮವಾಗಿ ಬಾಣಗೇರಿ ಗ್ರಾಮದ ನಿವಾಸಿ ಬಿ.ಆರ್. ಪ್ರದೀಪ್ ಎಂಬವರು ಸಾಗಿಸುತ್ತಿದ್ದ ಸಂದರ್ಭ ಇಲ್ಲಿನ ವೃತ್ತ ನಿರೀಕ್ಷಕರಾದ ಎಸ್. ಪರಶಿವಮೂರ್ತಿ ಸೇರಿದಂತೆ ಸಿಬ್ಬಂದಿಗಳು ಧಾಳಿ ನಡೆಸಿ ಆರೋಪಿಯೊಂದಿಗೆ ವಾಹನ ಮತ್ತು ಮರಳನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಮಂಜುನಾಥ್ ಹಾಗೂ ಪ್ರವೀಣ್ ಭಾಗವಹಿಸಿದ್ದರು.