ಗುಡ್ಡೆಹೊಸೂರು, ಫೆ. 10: ಬಸವನಹಳ್ಳಿಯ ಶ್ರೀ ಮೊರಾರ್ಜಿ ವಸತಿ ಶಾಲೆಯ ವಾರ್ಷಿಕೋತ್ಸವ ಮತ್ತು ಸಂಚಿಕೆ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕವಿಗಳಾದ ಜಯಪ್ಪ ಹೊನ್ನಾಳಿ (ಜಯಕವಿ), ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವಿಜು ಸುಬ್ರ್ರಮಣಿ ಮತ್ತು ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕೆ.ವಿ. ಸುರೇಶ್ ಅವರುಗಳು ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಸ್ವಾಗತಿಸಿ, ಶಿಕ್ಷಕ ರಮೇಶ್ ನಿರೂಪಿಸಿ, ಶಿಕ್ಷಕ ಸ್ವಾಮಿ ಶಾಲಾ ವರದಿ ಮಂಡಿಸಿದರು. ಶಿಕ್ಷಕ ಕರಿಯಪ್ಪ ವಂದಿಸಿದರು.