ಕುಶಾಲನಗರ, ಫೆ. 11: ಕುಶಾಲನಗರದ ನೆಹರೂ ಬಡಾವಣೆಯಲ್ಲಿನ ಶ್ರೀ ಬಲಮುರಿ ಸಿದ್ದಿವಿನಾಯಕ ದೇವಸ್ಥಾನದ 19ನೇ ವಾರ್ಷಿಕೋತ್ಸವ ಹಾಗೂ 17ನೇ ವರ್ಷದ ಉತ್ಸವ ಮೂರ್ತಿ ಮೆರವಣಿಗೆ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.

ಪೂಜೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಿಗ್ಗೆ ಸೂರ್ಯ ನಮಸ್ಕಾರ, ತೈಲಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಗಣಪತಿ ಹೋಮ, ಅಲಂಕಾರ ಸಹಸ್ರನಾಮ ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಅರ್ಚಕ ನಾಗರಾಜ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿಗಳು ಜರುಗಿದವು.

ಸಂಜೆ ವಿದ್ಯುತ್ ದೀಪಾಲಂಕಾರದೊಂದಿಗೆ ಮಂಟಪದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಗರ ಪ್ರಮುಖ ಬೀದಿಗಳಲ್ಲಿ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷರಾದ ಡಿ.ಜೆ. ರೇಣುಕುಮಾರ್, ಉಪಾಧ್ಯಕ್ಷ ಶಿವರಾಂ, ಕಾರ್ಯದರ್ಶಿ ಗೋವಿಂದರಾಜು, ಖಜಾಂಚಿ ರಾಮಕೃಷ್ಣಾಚಾರ್ ಸೇರಿದಂತೆ ನಿರ್ದೇಶಕರು ಹಾಗೂ ಭಕ್ತಾದಿಗಳು ಇದ್ದರು.