ಮಡಿಕೇರಿ, ಫೆ. 11: ಕೊಡಗಿನ ಎಲ್ಲಾ ಅಂಚೆ ಕಚೇರಿಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಅಟಲ್ ಪೆನ್‍ಶನ್ ಯೋಜನೆ, ಸುಕನ್ಯ ಸಮೃದ್ಧಿ ಯೋಜನೆ ಹಾಗೂ ವಿದ್ಯುತ್ ಬಿಲ್ ಪಾವತಿ ಸೇವೆಗಳು ಲಭ್ಯವಿದೆ.

ಕುಶಾಲನಗರ ಮತ್ತು ವೀರಾಜಪೇಟೆಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೇವೆಯೂ ಸಹ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.