ಸಿದ್ದಾಪುರ, ಫೆ. 12: ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಕೆ. ಮಣಿ ಅವರು ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿರುವದಾಗಿ ತಿಳಿಸಿದ್ದಾರೆ.

ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಜಿಲ್ಲಾ ಪಂಚಾಯತ್ ಸದಸ್ಯೆ ಸರಿತಾ ಪೂಣಚ್ಚ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಚ್.ಮೂಸಾ, ಮಾಜಿ ಸದಸ್ಯ ಎಸ್.ಬಿ. ಪ್ರತೀಶ್, ಗ್ರಾಮ ಪಂಚಾಯತ್ ಸದಸ್ಯರು, ಸಿದ್ದಾಪುರದ ವಿವಿಧ ಸಂಘ-ಸಂಸ್ಥೆಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ರಾಜೀನಾಮೆಯನ್ನು ಹಿಂಪಡೆಯಲು ಒತ್ತಾಯಿಸಿದ ಹಿನ್ನಲೆಯಲ್ಲಿ ವಾಪಾಸು ಪಡೆದಿರುವದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.