ಮಡಿಕೇರಿ, ಫೆ. 14 : ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ನಂಜರಾಯಪಟ್ಟಣ ಫೀಡರ್‍ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವದರಿಂದ ತಾ. 16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಂಜರಾಯಪಟ್ಟಣ ಫೀಡರ್‍ನಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅದ್ದರಿಂದ ನಂಜರಾಯಪಟ್ಟಣ ರಂಗಸಮುದ್ರ, ದುಬಾರೆ, ಗುಡ್ಡೆಹೊಸೂರು, ಅತ್ತೂರು, ರಸಲ್‍ಪುರ, ಗೊಂದಿಬಸವನಹಳ್ಳಿ, ವಾಲ್ನೂರು ತ್ಯಾಗತ್ತೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಪ್ರಕಟಣೆ ಕೋರಿದೆ.