ಸೋಮವಾರಪೇಟೆ, ಫೆ. 14: ನೇತಾಜಿ ವಿಚಾರ ವೇದಿಕೆ, ಸರಕಾರಿ ಪದವಿಪೂರ್ವ ಕಾಲೇಜು, ಕನ್ನಡ ಸಾಹಿತ್ಯ ಪರಿಷತ್, ನಿವೃತ್ತ ಸರಕಾರಿ ನೌಕರರ ಸಂಘ, ಶರಣ ಸಾಹಿತ್ಯ ಪರಿಷತ್, ಲಯನ್ಸ್ ಕ್ಲಬ್, ಮಾಜಿ ಸೈನಿಕರ ಸಂಘ, ನಗರ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾ. 16 ರ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಶ್ ಚಂದ್ರ ಬೋಸ್ ಸ್ಮರಣೀಯ ಕಾರ್ಯಕ್ರಮ ನಡೆಯಲಿದೆ.

ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸೋಮವಾರಪೇಟೆ ಉಪ ವಿಭಾಗದ ಉಪ ಅಧೀಕ್ಷಕ ಸಂಪತ್‍ಕುಮಾರ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಂಗಳೂರು ನೇತಾಜಿ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ಶಿವಶಂಕರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ನಿವೃತ್ತ ಉಪನ್ಯಾಸಕ ಸೇವಂತಿ ಡಿ. ರೈ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಶಿವಮೂರ್ತಿ, ನೇತಾಜಿ ವಿಚಾರ ವೇದಿಕೆಯ ಸಂಚಾಲಕ ಎಸ್.ಸಿ. ರಾಜಶೇಖರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ.