ಮಡಿಕೇರಿ, ಫೆ. 16: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವತಿಯಿಂದ ತಾ. 17ರಿಂದ 19ರವರೆಗೆ ಚೆರಿಯಪಂಡ ಸಿ.ಪಿ. ಕುಶಾಲಪ್ಪ ಜ್ಞಾಪಕಾರ್ಥ ಪುರುಷರ ಹಾಕಿ ಪಂದ್ಯಾಟ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ತಾ. 17ರಂದು (ಇಂದು) ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಕಾವೇರಿ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷ ಸಿ.ಬಿ. ದೇವಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿ.ಐ.ಟಿ.ಯ ಗೌರವ ಕಾರ್ಯದರ್ಶಿ ಚೆರಿಯಪಂಡ ರಾಕೇಶ್ ಪೂವಯ್ಯ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್, ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕ ಕುಲ್ಲಚಂಡ ಬೋಪಣ್ಣ ಭಾಗವಹಿಸಲಿದ್ದಾರೆ. ತಾ. 19ರಂದು ಸಮಾರೋಪ ಸಮಾರಂಭ ನಡೆಯಲಿದೆ.