ಗೋಣಿಕೊಪ್ಪಲು, ಫೆ. 17: ಹೊಸೂರು ಶ್ರೀ ಮಹಾದೇವರ ದೇವಸ್ಥಾನ ಕೆರೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು. ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೂಕೋಂಡ ವಿಜು ಸುಬ್ರಮಣಿ ಅವರು ಭೂಮಿಪೂಜೆ ನೆರವೇರಿಸಿದರು. ದೇವಸ್ಥಾನ ಕೆರೆ ಹೂಳೆತ್ತುವ ಕಾಮಗಾರಿ ಹಾಗೂ ಕೆರೆಯ ಸುತ್ತ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ ರೂ. 2.80 ಲಕ್ಷ ಜಿ.ಪಂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾ.ಪಂ.ಸದಸ್ಯ ಕುಟ್ಟಂಡ ಅಜಿತ್‍ಕರುಂಬಯ್ಯ, ಹೊಸೂರು ಗ್ರಾ.ಪಂ. ಅಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೊಳ್ಳೇರ ಭೀಮಯ್ಯ (ಸುಭಾಶ್), ಧನು ಪೂಣಚ್ಚ ಮುಂತಾದವರು ಉಪಸ್ಥಿತರಿದ್ದರು.