ಮಡಿಕೇರಿ, ಫೆ.19 : ಕೊಡವ ಭಾಷೆಯನ್ನು 8 ನೇ ಶೆಡ್ಯೂಲ್‍ಗೆ ಸೇರಿಸಬೇಕು ಮತ್ತು ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದು ಎಂದು ಪರಿಗಣಿಸಬೇಕೆಂದು ಒತ್ತಾಯಿಸಿ ಅಂತರರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ತಾ. 21 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಮಂಗಳವಾರ ಬೆಳಗ್ಗೆ 10.30 ಕ್ಕೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯ ಗಮನ ಸೆಳೆಯಲಾಗುವದೆಂದು ತಿಳಿಸಿದರು. ಪ್ರತೀ ವರ್ಷ ಆಕ್ಸ್‍ಫರ್ಡ್ ಡಿಕ್ಷ್ನರಿಯೂ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ನಡೆಸುತ್ತಿದೆ. ಈ ಡಿಕ್ಷ್ನರಿಯಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವದರ ಮೂಲಕ ಕೊಡವ ತಕ್ಕ್ ಮತ್ತು ಆಕ್ಸ್‍ಫರ್ಡ್ ಡಿಕ್ಷ್ನರಿ ಎರಡೂ ಸಮೃದ್ಧ ಮತ್ತು ಶ್ರೀಮಂತಗೊಳ್ಳಬೇಕೆಂಬ ಬೇಡಿಕೆ ಯೊಂದಿಗೆ ಒಟ್ಟು 14 ಹಕ್ಕೊತ್ತಾಯಗಳನ್ನು ಮಂಡಿಸುವದಾಗಿ ಅವರು ಹೇಳಿದರು.

ಕೊಡವ ಭಾಷೆ ಪ್ರಾಚೀನವೂ, ಸಮೃದ್ಧವೂ, ಶ್ರೀಮಂತವೂ ಆಗಿರುವ ಸ್ವತಂತ್ರ ಜನಪದೀಯ ಭಾಷೆಯಾಗಿದ್ದು, ಕೊಡಗಿನ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮಾತೃ ಭಾಷೆಯಾಗಿದೆ.

ಕೊಡವ ಭಾಷೆ ಭಾರತದ 16 ಪ್ರಧಾನ ಭಾಷೆಗಳಲ್ಲೊಂದೆಂಬದನ್ನು ವಿಶ್ವ ವಿಖ್ಯಾತ ಸಮಾಜ ವಿಜ್ಞಾನಿಗಳು, ರಾಜಕೀಯ

(ಮೊದಲ ಪುಟದಿಂದ) ವಿಜ್ಞಾನಿಗಳು, ಭಾಷಾ ವಿದ್ವಾಂಸರು, ಮಾನವ ಶಾಸ್ತ್ರಜ್ಞರು ಮತ್ತು ಶ್ರೇಷ್ಟ ಚಿಂತಕರಿಂದ ರಚಿಸಲ್ಪಡುತ್ತಿರುವ ಭಾರತದ ಆಡಳಿತ ಸೇವೆ ಐ.ಎ.ಎಸ್ ಮತ್ತು ಭಾರತದ ವಿದೇಶಾಂಗ ಸೇವೆ ಐ.ಎಫ್.ಎಸ್ ವಿದ್ಯಾರ್ಥಿಗಳ ಸ್ಪರ್ಧಾ ಪರೀಕ್ಷೆಗೆ ಪ್ರಧಾನ ಜ್ಞಾನ ಭಂಡಾರವಾಗಿರುವ ಮನೋರಮ ಪತ್ರಕಾ ಬಳಗ ಹೊರ ತರುತ್ತಿರು ವಾರ್ಷಿಕ ವಿಶ್ವಕೋಶ ಮನೋರಮ ಇಯರ್ ಬುಕ್ 2014, 2015, 2016 ಮತ್ತು 2017 ಸತತವಾಗಿ ಗುರುತಿಸಿ ದಾಖಲಿಸುತ್ತಾ ಬರುತ್ತಿರುವ ಹಿನ್ನೆಲೆಯಲ್ಲಿ ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆಗೊಳಿಸಲು ಬೇರ್ಯಾವದೇ ಮಾನ ದಂಡ ಅಥವಾ ಯಾರದೇ ಸರ್ಟಿಫಿಕೆಟ್ ಕೂಡ ಅವಶ್ಯಕತೆ ಇರುವದಿಲ್ಲ. ಸಂವಿಧಾನ ತಿದ್ದುಪಡಿಗೆ ಸಂಬಂಧ ಯಾವದೇ ರಾಜ್ಯದ ಶಾಸನ ಸಭೆ “ಯಾ” ಕ್ಯಾಬಿನೆಟ್ ನಿರ್ಣಯದ ಅವಶ್ಯಕತೆಯೂ ಕಂಡು ಬರುವದಿಲ್ಲ ಎಂದು ಎನ್.ಯು.ನಾಚಪ್ಪ ಅಭಿಪ್ರಾಯಪಟ್ಟರು.

ವಿಶ್ವ ಮಾತೃಭಾಷಾ ದಿನಾಚರಣೆ ಅಂಗವಾಗಿ ಇದಕ್ಕೆ ಪರಿಪೂರ್ಣ ಅರ್ಥ ಬರುವ ರೀತಿಯಲ್ಲಿ ಏಳಿಗೆ, ವಿಕಾಸ ಮತ್ತು ಅಭ್ಯುದಯಕ್ಕಾಗಿ ಕೊಡವ ಭಾಷೆಗೆ ಸಂಬಂಧಿಸಿದ ಈ ಪ್ರಧಾನ ಬೇಡಿಕೆಗಳು ಹಾಗೂ ಹಕ್ಕೊತ್ತಾಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.

ಬೇಡಿಕೆಗಳು

ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆಗೊಳಿಸ ಬೇಕು. ಕೊಡವ ತಕ್ಕನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು, ಕೊಡವ ಭಾಷೆ ಮತ್ತು ಆಕ್ಸ್‍ಫರ್ಡ್ ಡಿಕ್ಷ್ನರಿ ಎರಡೂ ಸಮೃದ್ಧಗೊಳ್ಳಲು ಸರ್ಕಾರ ಮುತುವರ್ಜಿ ವಹಿಸಬೇಕು, ಕೊಡವರ ಭಾಷೆ ಉಳಿಯಬೇಕು ಮತ್ತು ಭೂಮಿಯೂ ಉಳಿಯಬೇಕಾದರೆ ಕೊಡವ ಅಲ್ಪಸಂಖ್ಯಾತ ಬುಡಕಟ್ಟು ಕುಲವನ್ನು ಸಂವಿಧಾನದ 340 ಮತ್ತು 342ನೇ ವಿಧಿ ಪ್ರಕಾರ ಶೆಡ್ಯೂಲ್ ಪಟ್ಟಿಗೆ ಸೇರಿಸಿ ರಾಜ್ಯಾಂಗ ಖಾತರಿ ನೀಡಬೇಕು,

ಕೊಡವ ತಕ್ಕನ್ನು ಆಡಳಿತ ಭಾಷೆಯಾಗಿ ಸಂವಿಧಾನದ 350 ಬಿ ವಿಧಿಯಡಿ ಪರಿಗಣಿಸಬೇಕು, ಸಂವಿಧಾನದ 347ನೇ ವಿಧಿಯ ಪ್ರಕಾರ ಪಠ್ಯ ಕ್ರಮದಲ್ಲಿ ಸೇರಿಸಬೇಕು, ಕೊಂಕಣಿ ಮತ್ತು ಫ್ರೆಂಚ್ ಭಾಷೆಯ ಮಾದರಿಯಲ್ಲಿ ರಾಜ್ಯದ ಎರಡನೇ ಭಾಷೆಯಾಗಿ ಕೊಡವ ತಕ್ಕನ್ನು ಪರಿಗಣಿಸಬೇಕು, ಕೊಡವರನ್ನು ಭಾಷಾ ಅಲ್ಪಸಂಖ್ಯಾತರೆಂದು ಪರಿಗಣಿಸಿ ಸಂವಿಧಾನದ 29 ಮತ್ತು 30 ರನ್ವಯ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ವಿಶೇಷ ಮೀಸಲಾತಿ ಕಲ್ಪಿಸಬೇಕು, ಕನ್ನಡೀಕರಣಗೊಂಡಿರುವ ಕೊಡಗಿನ ಮೂಲ ಗ್ರಾಮಗಳ ಜನಪದೀಯ ಹೆಸರುಗಳನ್ನು ಮತ್ತೆ ಅದೇ ಜನಪದೀಯ ಹೆಸರಿನಿಂದಲೇ ದಾಖಲಿಸಬೇಕು, ಕೊಡವ ಅಲ್ಪಸಂಖ್ಯಾತ ಹಬ್ಬಗಳಾದ ಪುತ್ತರಿ ಕೈಲ್‍ಪೊವ್ದ್, ಎಡಮ್ಯಾರ್, ಕಕ್ಕಡ ಪದ್‍ನಟ್, ಕಾರಣಂಗೊಡ್ಪೊ ಮತ್ತು ಕಾವೇರಿ ಚಂಗ್ರಾಂದಿ ಇತ್ಯಾದಿ ಹಬ್ಬಗಳಿಗೆ ಅಧಿಕೃತ ರಜೆ ಘೋಷಿಸಬೇಕು, ಕೊಡಗರು ಎಂದು ಕಾಗುಣಿತ ದೋಷದಿಂದ ವಿರೂಪ ಗೊಂಡಿರುವ “ಕೊಡವ” ಸಮುದಾಯ ಸೂಚಕ ಹೆಸರನ್ನು “ಕೊಡವ” ಎಂದು ಗೆಜೆಟ್ ನೋಟಿಪಿ üಕೇಷನ್ ಹೊರಡಿಸಬೇಕು, ಕೊಡವ ತಕ್ಕ್‍ನ ವಾರ್ತೆಯನ್ನು ದೂರದರ್ಶನ (ಡಿ.ಡಿ ಮತ್ತು ಆಕಾಶವಾಣಿಯಲ್ಲಿ ಇತರೆ ಪ್ರಮುಖ ಭಾಷೆಗಳಂತೆ ನಿರಂತರ ಬಿತ್ತರಿಸಬೇಕು, ಕೊಡವ ತಕ್ಕ್‍ನ ವಿಶೇಷ ಅಧ್ಯಾಯವನ್ನು ಪ್ರಸಾರ ವಾರ್ತೆಯಲ್ಲಿ ಪ್ರಾರಂಭಿಸಬೇಕು, ಶತ್ರು ರಾಷ್ಟ್ರವಾದ ಪಾಕಿಸ್ತಾನದ ಬಲೂಚಿ ಭಾಷೆಯನ್ನು ಇತ್ತೀಚೆಗೆ ದೂರದರ್ಶನ ಮತ್ತು ಪ್ರಸಾರ ಭಾರತಿಯಲ್ಲಿ ನಿರಂತರ ಪ್ರಸಾರ ಮಾಡುತ್ತಿದ್ದು, ಇದಕ್ಕೆ ಸರ್ಕಾರ ಸಂಪೂರ್ಣ ಉತ್ತೇಜನ ನೀಡುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಎನ್.ಯು. ನಾಚಪ್ಪ ಬಿಬಿಸಿಯಲ್ಲಿ ಪಸ್ತೂನ್, ಖುರ್ದಿ ಭಾಷೆಗಳ ವಿಶೇಷ ಅಧ್ಯಾಯ ಪ್ರಾರಂಭಿಸಿದಂತೆ ಕೊಡವ ತಕ್ಕ್‍ನ ಅಧ್ಯಾಯ ಪ್ರಾರಂಭಿಸಲು ಸರ್ಕಾರ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖg Áದ ಮೂಕೊಂಡ ದಿಲೀಪ್ ಹಾಗೂ ಕೂಪದಿರ ಸಾಬು ಉಪಸ್ಥಿತರಿದ್ದರು.