ಸೋಮವಾರಪೇಟೆ, ಫೆ. 19: ಸಮೀಪದ ಕುಂಬೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವೀರೇಂದ್ರಕುಮಾರ್ ಮತ್ತು ಗೋವಿಂದರಾಜ್ ಅವರುಗಳು ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು.

ಈ ಸಂದರ್ಭ ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯ ಸೋಮಪ್ಪ, ಪ್ರಸನ್ನ, ಎಸ್‍ಡಿಎಂಸಿ ಅಧ್ಯಕ್ಷ ಮಂಜುನಾಥ್, ಆರೋಗ್ಯ ಇಲಾಖೆಯ ಮೇಲ್ವಿಚಾರಕಿ ಕುಸುಮಾ, ಶಾಲಾ ಮುಖ್ಯ ಶಿಕ್ಷಕಿ ಎಂ.ಬಿ. ರಾಜಣ್ಣ ಉಪಸ್ಥಿತರಿದ್ದರು.