ಮೂರ್ನಾಡು, ಫೆ. 19: ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ನಾಯಕತ್ವ ಅಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.

ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕೂಡಿಗೆ ಡಯಟ್ ವತಿಯಿಂದ ಹತ್ತು ದಿನಗಳ ಕಾಲ ಏರ್ಪಡಿಸಲಾದ ತರಬೇತಿ ಶಿಬಿರದಲ್ಲಿ ತಾಲೂಕಿನ 51 ಮಂದಿ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು. ಕೂಡಿಗೆ ಡಯಟ್ ಉಪನ್ಯಾಸಕ ಯು. ಸಿದ್ದೇಶಿ, ಬಿಳುಗುಂದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಆರ್. ಬಿಂದು, ವಾಟೆಕಾಡು ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕ ಟಿ.ಬಿ. ಕುಮಾರಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ತರಬೇತಿ ನೀಡಿದರು.