*ಗೋಣಿಕೊಪ್ಪಲು, ಪೆ. 19: ಅಭಯಾರಣ್ಯದಲ್ಲಿ ಉರುಳನ್ನಿಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಹೊಳೆ ಅರಣ್ಯಾಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳನ್ನಿಟ್ಟು ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ಉರುಳು ಸಹಿತ ಬಂಧಿಸಲಾಗಿದೆ. ಕಲ್ಲಳ್ಳ ವಲಯದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪಾಲ್ದಳ ಹಾಡಿಯ ಕುಟ್ಟ, ಬಸವ, ಮುತ್ತ, ಕಾಪಲ, ಚುಬ್ಬ ಬಂಧಿತ ಆರೋಪಿಗಳಾಗಿದ್ದಾರೆ.ಕಳೆದ ಒಂದು ತಿಂಗಳಿನಿಂದ ಉರುಳು ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಐವರನ್ನು ಬಂಧಿಸಿದ್ದಾರೆ. ಈವರೆಗೆ 600ಕ್ಕೂ ಹೆಚ್ಚು ಉರುಳುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣವನ್ನು ಪೊನ್ನಂಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.