ಸಿದ್ದಾಪುರ, ಫೆ. 22: ಬಿಳುಗುಂದ ಗ್ರಾ.ಪಂ. ವ್ಯಾಪ್ತಿಯ ಪರನಾಣೆ ಮೇಕೇರಿ ಗ್ರಾಮಗಳಿಗೆ ಜಿ.ಪಂ. ಸಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸಮೀಪದ ಬಿಳುಗುಂದ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪರಿಶಿಷ್ಟ ಜಾತಿ ಹಾಗೂ ಜನಾಂಗದವರಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಕಾಂಕ್ರೀಟ್ ರಸ್ತೆ, ತಡೆಗೋಡೆ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮುರಳಿ ದುರ್ಗಪ್ಪ, ಗ್ರಾ.ಪಂ. ಸದಸ್ಯರಾದ ಐನಂಡ ಪ್ರತಾಪ್, ವಸಂತಿ, ಸಮಾಜ ಕಲ್ಯಾಣ ಇಲಾಖೆಯ ಮಂಜು ಹಾಗೂ ಇನ್ನಿತರರು ಹಾಜರಿದ್ದರು.