*ಗೋಣಿಕೊಪ್ಪಲು, ಫೆ. 25: ಅರುವತ್ತೋಕ್ಲು ಕಾಡ್ಲಯ್ಯಪ್ಪ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಶಾಸಕರ ಅನುದಾನದಲ್ಲಿ ರೂ. 5 ಲಕ್ಷ ಮತ್ತು ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಅವರ ಅನುದಾನದಲ್ಲಿ ರೂ. 5 ಲಕ್ಷ ಒಟ್ಟು ರೂ. 10 ಲಕ್ಷ್ಷ ಅನುದಾನದಲ್ಲಿ ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತು.

ದೇವಸ್ಥಾನದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ಭಾಗದ ಜನರು ಹಲವು ಬಾರಿ ರಸ್ತೆ ಅಭಿವೃದ್ದಿಗೆ ಮನವಿ ಸಲ್ಲಿಸಿದ್ದರು. ಈ ಬಾರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಿ ಮಾರ್ಚ್ ತಿಂಗಳಲ್ಲಿ ನಡೆಯುವ ಹಬ್ಬದ ಸಂಭ್ರಮಕ್ಕೆ ದೇವಸ್ಥಾನದ ಮುಖ್ಯರಸ್ತೆಯ ಡಾಂಬರೀಕಣ ಮಾಡಲಾಗುವದು ಎಂದು ಶಾಸಕ ಕೆ.ಜಿ ಬೋಪಯ್ಯ ಮಾಹಿತಿ ನೀಡಿದರು.

ಜಿ.ಪಂ. ಸದಸ್ಯ ಸಿ.ಕೆ.ಬೋಪಣ್ಣ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಅರುವತ್ತೋಕ್ಲು ಸ್ಥಾನೀಯ ಸಮಿತಿ ಅಧ್ಯಕ್ಷ ಮನೆಯಪಂಡ ಬೋಪಣ್ಣ, ಅರುವತ್ತೋಕ್ಲು ಗ್ರಾ.ಪಂ. ಮಾಜಿ ಅಧ್ಯಕ್ಷ ವಿಕ್ರಂ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ವ್ಯಾಪಾರ ಪ್ರಕೋಷ್ಟ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ತಾಲೂಕು ಬಿ.ಜೆ.ಪಿ ಮಹಿಳಾ ಘಟಕ ಅಧ್ಯಕ್ಷೆ ಚೇಂದಂಡ ಸುಮಿ ಸುಬ್ಬಯ್ಯ, ಮಾಜಿ ಆರ್.ಎಂ.ಸಿ ಸದಸ್ಯ ಚಂದ್ರಶೇಖರ್, ತಾಲೂಕು ಬಿ.ಜೆ.ಪಿ ಕಾರ್ಯದರ್ಶಿ ಲಾಲಾ ಭೀಮಯ್ಯ ಉಪಸ್ಥಿತರಿದ್ದರು.