ಮಡಿಕೇರಿ, ಫೆ. 27: ಕರ್ನಾಟಕ ಸರ್ಕಾರದÀ ಸಮಾಜ ಕಲ್ಯಾಣ ಇಲಾಖೆ ಸಮ್ಮೇಳನ ಆಯೋಜನಾ ಸಮಿತಿ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ವಿಶ್ವವಿದ್ಯಾನಿಲಯ ಹಾಗೂ ಕಾವೇರಿ ಕಾಲೇಜು ಗೋಣಿಕೊಪ್ಪಲು ಸಹಯೋಗದಲ್ಲ್ಲಿ ಬಾಬಾ ಸಾಹೇಬ್ ಡಾ|| ಬಿ. ಆರ್. ಅಂಬೇಡ್ಕರ್ ಅವರ 125ನೇ ಜಯಂತಿಯ ವರ್ಷಾಚರಣೆಯ ಅಂಗವಾಗಿ ತಾ. 28 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜು ಸಭಾಂಗಣದಲ್ಲಿ ಅಂಬೇಡ್ಕರ್ ಜ್ಞಾನ ದರ್ಶನ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಮೈಸೂರು ವಿಶ್ವವಿದ್ಯಾನಿಲಯದ ಉನ್ನತ ಸಂಶೋಧಕ ಡಾ|| ಡಿ.ಜೆ. ಶಶಿಕುಮಾರ್ ಉಪನ್ಯಾಸ ನೀಡಲಿದ್ದಾರೆ. ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ|| ಎ.ಸಿ. ಗಣಪತಿ, ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಿ. ಮುರುಳಿ, ಕಾವೇರಿ ಕಾಲೇಜು ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣ, ಪ್ರೊ, ಎಂ.ಡಿ. ಅಕ್ಕಮ್ಮ ಭಾಗವಹಿಸಲಿದ್ದಾರೆ.