ಸಿದ್ದಾಪುರ, ಫೆ. 27: ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ಸವಿತಾ ಸಮಾಜ ಶಾಖೆಯ ವಾರ್ಷಿಕ ಮಹಾಸಭೆಯು ತಾ. 28 ರಂದು ನೆಲ್ಯಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್ ದೊರೇಶ್ ಹಾಗೂ ತಾಲೂಕು ಪ್ರತಿನಿಧಿ ಕೆ.ಎಸ್. ದಿನೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಕೆ.ಎಸ್.ದೊರೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾದ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ವೆಂಕಟೇಶ್, ಜಿಲ್ಲಾ ಪ್ರತಿನಿಧಿ ವೈ. ಪುಟ್ಟರಾಜು, ಮಹಿಳಾ ಜಿಲ್ಲಾಧ್ಯಕ್ಷೆÀ್ಷ ರಾದಮ್ಮ, ತಾಲೂಕು ಅಧ್ಯಕ್ಷರು, ತಾಲೂಕು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ನೂತನವಾಗಿ ಆಯ್ಕೆಗೊಂಡ ಸಂಘದ ಪದಾಧಿಕಾರಿಗಳಿಗೆ ಹಾಗೂ ಸಮಾಜದ ಜನಪ್ರತಿನಿಧಿಗಳಿಗೆ ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ಗೋಷ್ಠಿಯಲ್ಲಿ ತಾಲೂಕು ಉಪಾಧ್ಯಕ್ಷ ಕಣ್ಣ, ಪದಾಧಿಕಾರಿಗಳಾದ ಮಂಜು ಪಾಲಿಬೆಟ್ಟ, ಕೆ.ಎಸ್ ಸುರೇಶ್ ಇದ್ದರು.