ಮಡಿಕೇರಿ, ಫೆ. 28: ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ನೂತನ ಗೋದಾಮು ಹಾಗೂ ಸಭಾಂಗಣ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕ ಕೆ.ಜಿ.ಬೋಪಯ್ಯ ಅವರು ನೂತನ ಗೋದಾಮು ಉದ್ಘಾಟಿಸಲಿದ್ದಾರೆ. ಮಡಿಕೇರಿ ಕೆ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಬಿ.ಡಿ.ಮಂಜುನಾಥ ಅವರು ಸಭಾಂಗಣ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯಕುಮಾರ್, ಮಡಿಕೇರಿ ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ಅಪೆಕ್ಸ್ ಬ್ಯಾಂಕ್‍ನ ನಿರ್ದೇಶಕರಾದ ಕೊಡಂದೇರ ಪಿ.ಗಣಪತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಡಿ.ರವಿಕುಮಾರ್, ವೀರಾಜಪೇಟೆ ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಎಸ್.ಮೋಹನ್, ಮಾಯಮುಡಿ ಗ್ರಾ.ಪಂ.ಅಧ್ಯಕ್ಷೆ ಬಿ.ಎಂ. ಭವಾನಿ ಪಾಲ್ಗೊಳ್ಳಲಿದ್ದಾರೆ.