ವೀರಾಜಪೇಟೆ, ಮಾ. 1: ಅಮ್ಮತ್ತಿ ಕೊಡವ ಸಮಾಜದ ಸುತ್ತ ನಿರ್ಮಿಸಿರುವ ಸುಮಾರು ರೂ. 5 ಲಕ್ಷ ವೆಚ್ಚದ ತಡೆಗೋಡೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಪೂಜೆ ಸಲ್ಲಿಸಿ ಶುಭ ಹಾರೈಸಿದರು.

ಕೊಡವ ಸಮಾಜದ ಅಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಶಾಸಕ ಕೆ.ಜಿ. ಬೋಪಯ್ಯ, ಸುಜಾ ಕುಶಾಲಪ್ಪ, ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ಹಾಜರಿದ್ದರು