*ಸಿದ್ದಾಪುರ, ಮಾ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಸಮೀಪದ ಅಭ್ಯತ್‍ಮಂಗಲ ಗ್ರಾಮದಲ್ಲಿ ರಚಿಸಲಾಗಿರುವ ಪ್ರಗತಿ ಬಂಧು ಸ್ವ ಸಹಾಯ ಸಂಘವನ್ನು ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯತ್ ಸದಸ್ಯ ಅಂಚೆಮನೆ ಸುಧಿ ಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಸ್ವಾವಲಂಭಿ ಬದುಕು ಮತ್ತು ಗ್ರಾಮಾಭಿವೃದ್ಧಿಯ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.