ಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಸ್ತು ಪ್ರದರ್ಶನದಲ್ಲಿ ವಿವಿಧ ಶಾಲೆಯ ತಂಡಗಳು ಹಾಗೂ ಬಸವನಹಳ್ಳಿ ಶಾಲೆ ಸೇರಿದಂತೆ ಸುಮಾರು 15 ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಭಾರತಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಕುಡೆಕ್ಕಲ್ ಸುಶೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಈಸಪ್ಪ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ನಿವೃತ ಶಿಕ್ಷಕಿ ಕೆ.ಕೆ. ಶೇಷಮ್ಮ, ಶಿಕ್ಷಕಿ ಜಯಮ್ಮ, ಶಾಲೆಯ ಮುಖ್ಯ ಶಿಕ್ಷಕ ಕೃಷ್ಣನಾಯ್ಕ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರು ಗಳಾದ ಗುರುಬಸಪ್ಪ, ಬಿ.ಎಸ್. ಧನಪಾಲ್ ಹಾಗೂ ಶಿಕ್ಷಕರು ಹಾಜರಿದ್ದರು. ವಿಜ್ಞಾನ ಶಿಕ್ಷಕ ವೆಂಕಟೇಶ್ ಸ್ವಾಗತಿಸಿ, ಶಿಕ್ಷಕ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.