ಕುಶಾಲನಗರ, ಮಾ. 6: ವೈದ್ಯರ ನಿರ್ಲಕ್ಷ್ಯತೆಗೆ ಒಳಗಾಗಿ ಕೋಮಾ ಸ್ಥಿತಿಗೆ ಒಳಗಾಗಿದ್ದ ಕುಶಾಲನಗರದ ಬಾಲಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಇಂದು ನಡೆದಿದೆ.

ಕುಶಾಲನಗರ ಪತ್ರಿಕಾ ಏಜೆಂಟ್ ಮುಖೇಶ್ ಅವರ ಪುತ್ರ ಬಿಪಿನ್ (7)ನನ್ನು ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರ ನಿರ್ಲಕ್ಷ್ಯತೆಯಿಂದ ಬಾಲಕನಿಗೆ ನೀಡಿದ ಚುಚ್ಚು ಮದ್ದು ಏರಿಪೇರಾಗಿ ಬಾಲಕ ಕೋಮಾಸ್ಥಿತಿಗೆ ತಲಪಿ ಇಂದು ಮೃತಪಟ್ಟಿರುವದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಆಸ್ಪತ್ರೆ ವಿರುದ್ಧ ಪ್ರತಿಭಟಿಸಿ ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೋಷಕರು ಹಾಗೂ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.