ವೀರಾಜಪೇಟೆ, ಮಾ. 7: ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಿಲ್ಲೆಯ ಕಾರ್ಮಿಕ ಮಹಿಳೆಯೊಬ್ಬರು ಸಾಧನೆ ಮಾಡಿದ್ದಾರೆ. ಫೆ. 21 ರಿಂದ 25ರ ವರೆಗೆ ಹೈದರಾಬಾದ್‍ನಲ್ಲಿ ನಡೆದ 38ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಹಡ್ಲಿ ಗ್ರಾಮದ ಕಾರ್ಮಿಕ ಮಹಿಳೆ ಕಮಲಾ ಸುರೇಶ್ ಅವರು 800 ಮೀ. ಓಟದಲ್ಲಿ ಮೂರನೇ ಸ್ಥಾನ ಪಡೆದು ಬಹುಮಾನಕ್ಕೆ ಭಾಜನರಾಗಿದ್ದಾರೆ.