ಸೋಮವಾರಪೇಟೆ,ಮಾ.8: ತಾಲೂಕಿನ ಕೊಡ್ಲಿಪೇಟೆ ಹೋಬಳಿಯ ಬೆಳ್ಳಾರಳ್ಳಿ ಗ್ರಾಮದ ಸ.ನಂ. 38/1 ರಲ್ಲಿ 12.68 ಎಕರೆ ಮತ್ತು 38/4ರ ಜಮೀನು ಒತ್ತುವರಿಯಾಗಿದ್ದು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ತಾಲೂಕು ತಹಶೀಲ್ದಾರ್ ಸರ್ವೆ ಹಾಗೂ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಂದಾಯ ಪರಿವೀಕ್ಷಕರು ಮತ್ತು ಸರ್ವೆ ಇಲಾಖೆಯವರು ಜಂಟಿಯಾಗಿ ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ನಾಮಫಲಕ ಅಳವಡಿಸಿ ನಕಾಶೆಯೊಂದಿಗೆ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಿದ್ದಾರೆ.