ಮಡಿಕೇರಿ, ಮಾ. 8: ವೀರಾಜಪೇಟೆಯ ಕಾವೇರಿ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ತಾ. 11 ರಂದು ಬೆಳಿಗ್ಗೆ 10 ಗಂಟೆಗೆ ಜಾನಪದ ನೃತ್ಯ ಸ್ಪರ್ಧೆಯನ್ನು ಜಿಲ್ಲಾಮಟ್ಟದಲ್ಲಿ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಈರಪ್ಪ ಭಾಗವಹಿಸಲಿದ್ದಾರೆ.