ವೀರಾಜಪೇಟೆ, ಮಾ. 8: ಮಹಾಶಿವರಾತ್ರಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸ್ಥಳೀಯ ಅಪ್ಪಯ್ಯಸ್ವಾಮಿ ರಸ್ತೆಯ ಶ್ರೀ ಮಹಾಗಣಪತಿ ಆಂಜನೇಯ ದೇವಾಲಯದಲ್ಲಿ ಶಾಸ್ತ್ರೀಯ ಸಂಗೀತೋತ್ಸವ ಮತ್ತು ಭರತನಾಟ್ಯ ಕಾರ್ಯಕ್ರಮ ನಡೆಯಿತು. ಗಾಯಕ ಬಿ.ಎಸ್. ದಿಲಿಕುಮಾರ್ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವೀರಾಜಪೇಟೆಯ ಹಿರಿಯ ವೈದ್ಯ ಡಾ. ದೀಪಕ್ ಅವರು ಉದ್ಘಾಟಿಸಿದರು.

ಬಸವೇಶ್ವರಗುಡಿ: ಈ ವರ್ಷದ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಸ್ಥಳೀಯ ಜೈನರಬೀದಿಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಡಿಕೇರಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಾಯೋಜಕತ್ವದಲ್ಲಿ ಸಂಗೀತೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ವೀರಾಜಪೇಟೆಯ ಸ್ವರಾರ್ಣವ ಸಂಗೀತ ಶಾಲೆಯ ಬಿ.ಎಸ್. ದಿಲಿಕುಮಾರ್ ತಂಡದವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವೀರಾಜಪೇಟೆಯ ಹಿರಿಯ ವೈದ್ಯ ಡಾ. ಎಸ್.ವಿ. ನರಸಿಂಹನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎನ್. ಗೋಪಾಲಕೃಷ್ಣ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.