ಶನಿವಾರಸಂತೆ, ಮಾ. 8: ಹಂಡ್ಲಿ ಗ್ರಾ.ಪಂ.ಗೆ ಸೇರಿದ ಗುಡುಗಳಲೆ ಹಾಗೂ ಶಿರಂಗಾಲ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರು ತಮ್ಮ ವೈಯಕ್ತಿಕ ಅನುಕೂಲಕ್ಕಾಗಿ ರಾಜ್ಯ ಹೆದ್ದಾರಿಯನ್ನು ಜೆಸಿಬಿಯಿಂದ ಸುಮಾರು ಒಂದೂವರೆ ಕಿ.ಮೀ.ನಷ್ಟು ಅಗೆದು ಅನಾನುಕೂಲ ಸೃಷ್ಟಿಸಿದ್ದಾರೆ ಎಂದು ಕ.ರ.ವೇ. ಆರೋಪಿಸಿದೆ.

ಈ ಬಗ್ಗೆ ಲೋಕೋಪಯೋಗಿ ಇಲಾಖೆ ಗಮನ ಹರಿಸಿ ಅವ್ಯವಸ್ಥೆಯನ್ನು ಒಂದು ವಾರದೊಳಗೆ ಸರಿಪಡಿಸದಿದ್ದಲ್ಲಿ ಪ್ರತಿಭಟನೆ ನಡೆಸುವದಾಗಿ ಕರ್ನಾಟಕ ರಕ್ಷಣಾ ವೇದಿಕೆ ಹೋಬಳಿ ಘಟಕದ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ತಿಳಿಸಿದ್ದಾರೆ.