ಗೋಣಿಕೊಪ್ಪಲು, ಮಾ. 8: ಜಿಲ್ಲೆಯ ಮದರಸ, ಮಸೀದಿ ಹಾಗೂ ಸ್ಮಶಾನಗಳ ಅಭಿವೃದ್ಧಿಗೆ ರೂಪಾಯಿ 3 ಕೋಟಿ ಬಿಡುಗಡೆ ಮಾಡಲಾಗುವದು ಎಂದು ರಾಜ್ಯ ವಕ್ಫ್ ಸಚಿವ ತನ್ವೀರ್ ಸೇಠ್ ಭರವಸೆ ನೀಡಿದ್ದಾರೆ.ಸಚಿವ ತನ್ವೀರ್ ಸೇಠ್ ಅವರನ್ನು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಭೇಟಿ ಮಾಡಿ ಜಿಲ್ಲೆಯ ಮಸೀದಿಗಳ ಅಭಿವೃದ್ಧಿಗೊಳಿಸಲು ಅನುದಾನ ಬಿಡುಗಡೆಗೆ ಮನವಿ ಮಾಡಿಕೊಂಡಿದ್ದು. ಸಚಿವರಿಂದ ಸಕಾರಾತ್ಮಕ ಸ್ಪಂದನ ದೊರಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ತಿಳಿಸಿದ್ದಾರೆ.ಸಚಿವರ ಭೇಟಿ ಸಂದರ್ಭ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮ್ಮದ್, ಸಂಘಟನಾ ಕಾರ್ಯದರ್ಶಿ ಶಮೀರ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ (ಬಾಪು), ಗೋಣಿಕೊಪ್ಪ ನಗರ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕಲೀಮುಲ್ಲಾ, ಕಾಂಗ್ರೆಸ್ ಮುಖಂಡ ಪಿ.ಎಂ ಸಾಹಿದ್ ಇದ್ದರು.