ಗುಡ್ಡೆಹೊಸೂರು, ಮಾ. 9: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜಾÐನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಸುಮಾರು 15 ತಂಡಗಳು ಭಾಗವಹಿಸಿ ನೋಡುಗರ ಗಮನ ಸೇಳೆದವು.

ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಭಾರತಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಕುಡೆಕ್ಕಲ್ ಸುಶೀಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಈಸಪ್ಪ ಪಾಲ್ಗೊಂಡು ದಿನದ ಮಹತ್ವದ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ನಿವೃತ ಶಿಕ್ಷಕಿಯವರಾದ ಕೆ.ಕೆ. ಶೇಷಮ್ಮ, ಶಿಕ್ಷಕಿ ಜಯಮ್ಮ, ಶಾಲೆಯ ಮುಖ್ಯ ಶಿಕ್ಷಕ ಕೃಷ್ಣನಾಯ್ಕ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರುಗಳಾದ ಗುರುಬಸಪ್ಪ, ಬಿ.ಎಸ್. ಧನಪಾಲ್, ಹಾಗೂ ಶಿಕ್ಷಕ ವೃಂದ ಹಾಜರಿದ್ದರು. ಈ ಸಂದರ್ಭ ವಿಜ್ಞಾನ ಶಿಕ್ಷಕ ವೆಂಕಟೇಶ್ ಸ್ವಾಗತಿಸಿದರು.