ಮಡಿಕೇರಿ, ಮಾ. 10: ಇಲ್ಲಿನ ಪೆನ್‍ಷನ್ ಲೇನ್‍ನಲ್ಲಿರುವ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಆವರಣದಲ್ಲಿ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಕಟ್ಟಡ ಕಾಮಗಾರಿಗೆ ದೇಣಿಗೆ ಪುಸ್ತಕ ಬಿಡುಗಡೆ ಮಾಡುವ ಮೂಲಕ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಚಾಲನೆ ನೀಡಿದರು. ಈ ಸಂದರ್ಭ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಸಮಿತಿ ಸದಸ್ಯರುಗಳು ಹಾಜರಿದ್ದರು.