ಸೋಮವಾರಪೇಟೆ, ಮಾ. 10: ಇಲ್ಲಿನ ಲಯನ್ಸ್ ಸೇವಾ ಸಂಸ್ಥೆ ವತಿಯಿಂದ 2016-17ನೇ ಸಾಲಿನ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ ತಾ. 12 ರಂದು ಸಂಜೆ 4.30ಕ್ಕೆ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಾಂತೀಯ ಅಧ್ಯಕ್ಷ ಎಸ್.ಬಿ. ಲೀಲಾರಾಂ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಲಯನೆಸ್ ವಸಂತಿ ಲೀಲಾರಾಂ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ಕುಲ ಸಚಿವ ಪ್ರೊ. ನಿರಂಜನ್ ವಾನಳ್ಳಿ, ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮಿಲನದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಕಾರ್ಯದರ್ಶಿ ಜೆ.ಸಿ. ಶೇಖರ್, ಖಜಾಂಚಿ ಕೆ.ಎಂ. ಜಗದೀಶ್, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಮಹೇಶ್, ಕಾರ್ಯದರ್ಶಿ ಮಂಜುನಾಥ ಚೌಟ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.