ನಾಪೆÇೀಕ್ಲು, ಮಾ. 13: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ್ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವು ಸಾಧಿಸಿರುವದರಿಂದ ನಾಪೆÇೀಕ್ಲು ಸ್ಥಾನಿಯ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ನಾಪೆÇೀಕ್ಲು ಪಟ್ಟಣದಲ್ಲಿ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭ ಜಿ.ಪಂ. ಸದಸ್ಯ ಪಾಡಿಯಮ್ಮಂಡ ಮರುಳಿ ಕರುಂಬಮ್ಮಯ್ಯ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ಜನ ಒಪ್ಪಿಕೊಂಡಿದ್ದಾರೆ ಎಂಬದಕ್ಕೆ ಸಾಕ್ಷಿಯಾಗಿದೆ ಎಂದರು. ಈ ಸಂದರ್ಭ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಲ್ಲಮಾವಟಿ ಗ್ರಾ.ಪಂ. ಅಧ್ಯಕ್ಷೆ ಕರವಂಡ ಸರಸು, ನಾಪೆÇೀಕ್ಲು ಗ್ರಾಂ.ಪಂ. ಸದಸ್ಯ ಶಿವಚಾಳಿಯಂಡ ಜಗದೀಶ್, ಕುಲ್ಲೇಟಿರ ಜ್ಯೋತಿ, ಚೀಯಕಪೂವಂಡ ಮುತ್ತು ರಾಣಿ ಅಚ್ಚಪ್ಪ, ಬೊಟ್ಟೋಳಂಡ ಚಿತ್ರ, ಮೇದರ ಪೂವಮ್ಮ, ಪೂಣಚ್ಚ, ಕನ್ನಂಬೀರ ಸುಧಿ, ಅರೆಯಡ ಅಶೋಕ್, ಪಾಡಿಯಮ್ಮಂಡ ಮನು ಮಹೇಶ್, ಶಿವಚಾಳಿಯಂಡ ಕಿಶೋರ್, ಹರಿದಾಸ್, ಮತ್ತಿತರರು ಇದ್ದರು.