ನಾಪೋಕ್ಲು, ಮಾ. 13 : ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರದ ಕ್ಷೇತ್ರ ಪಾಲಕಿ ಪ್ರಧಾನ ದೈವ ಶ್ರೀ ಪಾಷಾಣಮೂರ್ತಿ ಅಮ್ಮನವರ ಪುನರ್ ಪ್ರತಿಷ್ಠೆ ಬ್ರಹ್ಮಶ್ರೀ ವೇದ ಮೂರ್ತಿ ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವ ದಲ್ಲಿ ವೈಭಯುತವಾಗಿ ನಡೆಯಿತು. ಈ ಸಂದರ್ಭದಲ್ಲಿ ಪವಿತ್ರಪಾಣಿ ಕುಮಾರಸ್ವಾಮಿ ಬೈಪಾಡಿತ್ತಾಯ, ಜೀಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ.ದಿವಾಕರ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯಾಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್‍ಕುಮಾರ್ ಉಳುವಾರು, ದೇವಳದ ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ, ಕೃಷ್ಣ ಬೈಪಾಡಿತ್ತಾಯ, ಕೃಪಾಶಂಕರ ತುಡಿಯಡ್ಕ, ದೇವಳ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ, ಕೆ.ಕೆ. ನಾರಾಯಣ ಎಸ್.ಪಿ ಲೋಕನಾಥ, ನಾಗಪ್ಪ ಗೌಡ ಬಾಳೆಕಜೆ,ಕೇಶವ ಕೊಳಲುಮೂಲೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. -ದುಗ್ಗಳ